Sunday 24 July 2011

ಜೀವನ

ಸಾಗರದ ಅಲೆಗಳು...
ಒಂದರ ಹಿಂದೊಂದು..
ಒಂದಕ್ಕೂ ಹೆಸರಿಲ್ಲ..
ಒಂದಕ್ಕೂ ಗುರಿ ಇಲ್ಲ..
ಹಾಗೆ ಬಂದು ಹೀಗೆ ಹೋದ ಅಲೆಗಳು...
ಬರಿಯ ನೀರು ..ಹೆಸರಿಲ್ಲದ ಉಸಿರಿಲ್ಲದ ನೀರು...

ಬದುಕಿನ ಹೊತ್ತಿಗೆಯಲ್ಲಿ
ನೂರಾರು ಪುಟಗಳು..
ಹೀಗೆ ಬಂದು ಹಾಗೆ ಹೋದ ಖಾಲಿ ಪುಟಗಳು..
ಕೆಲವಕ್ಕೆ ಬಣ್ಣವಿಲ್ಲ...
ಹಲವಕ್ಕೆ ಪದಗಳಿಲ್ಲ....
ಬರಿಯ ಅಕ್ಷರಗಳು.....ಅರ್ಥವಿಲ್ಲದ ವ್ಯರ್ಥ ಅಕ್ಷರಗಳು...

ಬಾಳ ಬನದಲ್ಲಿ
ನೂರಾರು ಮರಗಳು..
ಹುಟ್ಟಿ ಮುರುಟಿ ಹೋಗೊ ಸಂಬಂಧಗಳು...
ಕೆಲವಕ್ಕೆ ಒಲವಿಲ್ಲ....
ಉಳಿದವಕ್ಕೆ ಬಲವಿಲ್ಲ..
ಬರಿಯ ಬಂಧಗಳು..ಬೇಡದ ಬಂಧನಗಳು...

ನೀರಲ್ಲೂ ಜೇನ...ಅಕ್ಷರದಲ್ಲೂ ಹಾಡ.. ಬಂಧನದಲ್ಲೂ ಅನುಬಂಧ
ಹುಡುಕೋದೆ ಜೀವನ....
ಇದು ಬರಿ ಉಸಿರಲ್ಲ ಗೆಳೆಯ...
ಇದು ಜೀವಾಮೃತ...
ಇದನರಿಯದಿದ್ದರೆ...ಜೀವನ ಅನೃಥ ..

1 comment:

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...