Saturday 30 July 2016

ಅದೊಂದು ಸಂಸಾರ...ಅಪ್ಪಅಮ್ಮ, ಮಗ ಸೊಸೆ, ಮೊಮ್ಮಗ..ಎಲ್ಲವೂ ಚೆಂದ ಅನ್ನೋ ಹಾಗೆ ಬದುಕು ನಡಿತಾ ಇತ್ತು....
ಇದ್ದಕ್ಕಿದ್ದ ಹಾಗೆ ಒಂದು ದಿನ ಮಗ ಖಾಯಿಲೆ ಬಿದ್ದ...ಸ್ವಲ್ಪ ಕಾಲ ಬಹಳ ಹಿಂಸೆ ಅನುಭವಿಸಿದ...ಕಡೆಗೆ ಒಮ್ಮೆ ಸತ್ತೂ ಹೋದ...
ಕುಟುಂಬಕ್ಕೆ ದಿಕ್ಕೇ ತೋಚದಂತೆ ಆಯಿತು ..ಎಲ್ಲಾ ಗೋಳಾಡುತ್ತಾ ಕುಳಿತರು..
ಅಪ್ಪ ಹೇಳಿದ.."ನಿನ್ನ ಬದಲು ವಯಸ್ಸಾದ ನಾನೇ ಹೋಗಬಾರದಿತ್ತೇ."ಅಮ್ಮ ಕೂಡ ಹಾಗೆ ಅತ್ತಳು...ಹೆಂಡತಿ ಮಗ ಕೂಡ ತುಂಬಾನೇ ಸಂಕಟಪಟ್ಟರು..
ಆ ಹಾದಿಯಲ್ಲಿ ಒಬ್ಬ ಸಾಧು ಬಂದ ...ಈ ಗದ್ದಲ ಕೇಳಿ ಬಂದು ಸಂತೈಸಿದ ..ಹುಟ್ಟು ಸಾವಿನ ಬಗ್ಗೆ ಲೆಕ್ಕ ಹೇಳಿದ....ಅವರ ಸಂಕಟ ಕಮ್ಮಿಯಾಗದಿದ್ದಾಗ, ಒಂದು ಬಟ್ಟಲು ನೀರು ತೆಗೆದುಕೊಂಡ...ಹೇಳಿದ.."ನಿಮ್ಮಲ್ಲಿ ಯಾರಾದ್ರೂ ಈ ನೀರು ಕುಡಿದರೆ ನಾ ಅವನ ಬದುಕಿಸಬಲ್ಲೆ...ಆದರೆ ನೀರು ಕುಡಿದವರು ಸಾಯುತ್ತಾರೆ ".
ಎಲ್ಲಾ ಮುಖ ಮುಖ ನೋಡಿಕೊಂಡರು...ಅಳು ನಿಂತಂತೆ ಕಂಡಿತು...
ಸಾಧು ಅಪ್ಪನ ಮುಖ ನೋಡಿದ..ಅಪ್ಪ ಹೇಳಿದ.."ಅಯ್ಯೋ ನಾನು ಸತ್ತೂ ಹೋದರೆ ವಯಸ್ಸಾದ ನನ್ನ ಹೆಂಡತಿಯ ಯಾರು ನೋಡಿಕೊಳ್ತಾರೆ"....
ಸಾಧು ಅಮ್ಮನ ಕಡೆ ನೋಡಿದ.."ನನ್ನ ಮಗಳು ಮುಂದಿನ ತಿಂಗಳು ಬಾಣಂತನಕ್ಕೆ ಬರುವವಳಿದ್ದಾಳೆ..ಅವಳಿಗೆ ..ನನ್ನ ಗಂಡನಿಗೆ ದಿಕ್ಕು ಯಾರು" ಅಂದ್ಲು...
ಸಾಧು ಈಗ ಸೊಸೆ ಕಡೆ ನೋಡಿದ.."ಅವನಿಲ್ಲದೆ ಬದುಕು ನನಗೆ ಕಷ್ಟಾನೆ..ಆದ್ರೆ ನಾನು ಸತ್ತೂ ಹೋದರೆ ನನ್ನ ಮಗನ ಕಥೆ ????" ಅಂದ್ಲು....ಇನ್ನು ಪುಟ್ಟ ಮೊಮ್ಮಗನ ಕಡೆ ಸಾಧು ತಿರುಗುವ ಮುನ್ನ ಸೊಸೆ ಹುಡುಗನ್ನ ಬಾಚಿ ತಬ್ಬಿಕೊಂಡಳು ಎಲ್ಲಿ ಸಾಧು ಅವನನ್ನ ಕಿತ್ತು ಕೊಳ್ತಾನೋ ಎಂಬಂತೆ...
ಈಗ ನಕ್ಕ ಸಾಧು, ಹೇಳಿದ..."ಸಾವು ಅನ್ನೋದು ಹಾಗೆ...ನಮ್ಮ ಕಾಲ ಮುಗಿದ ಮೇಲೆ ನಾನು ಹೋಗಲೇ ಬೇಕು...ಮುಂದಿನ ಕೆಲಸ ಮಾಡಿ"ಅಂದ .....
ಕ್ಷಣಗಳಲ್ಲಿ ದಾರಿಯ ತಿರುವಿನಲ್ಲಿ ಕಾಣದಂತೆ ಹೊರಟು ಹೋದ...
"ಆಗಮನ...ನಿರ್ಗಮನ...ಎರಡು ಕಾಣದ ಕೈಗಳಲ್ಲಿ ಇವೆಯಂತೆ...ಅವನಿಗೆ ಇಷ್ಟ ಆದಾಗ ಹೂ ಅರಳಿಸುವನಂತೆ...ಅವನಿಗೆ ಇಷ್ಟ ಆದಾಗ ಹೂವು ಎಷ್ಟೇ ಸುಂದರವಾಗಿದ್ದರು ಕಿತ್ತು ಕರೆದೊಯ್ವನಂತೆ.......
Love Lasts As Long As Life Exists
The Rest Is Only Memories Of Happy Times..!!!!!
ನೆನ್ನೆ ಬೇಸರಗೊಂಡಿದ್ದ ನನಗೆ ನನ್ನ ಅತಿ ಆತ್ಮೀಯ ಹಿರಿಯ ಮಿತ್ರರೊಬ್ಬರ Mail kathe....ಅವರಿಗೆ ನನ್ನ ಮನದಾಳದ ನಮನ...:))))


No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...