Tuesday 25 October 2016

ಲಕ್ಷ್ಮಿ ತನ್ನ ಪೂಜೆಯಿಂದ ತುಂಬಾ ಪ್ರಸನ್ನಗೊಂಡಿದ್ದಳು. ಜೊತೆಗೆ ಒಂದಷ್ಟು ಅಹಂ, ಜಂಬ ಕೂಡ ... 
ಗಂಡನಿಗೆ ಹೇಳಿದ್ಳು 'ನೋಡಿದ್ರಾ, ನಾ ಅಂದ್ರೆ ಹೆಂಗೆ, ನಾನು ಅಂದ್ರೆ ಬೇಡ ಅನ್ನೋರೇ ಇಲ್ಲ, ಪೂಜೆ, ಸೇವೆ, ನೈವೇದ್ಯ ಎಲ್ಲಾ ನೋಡಿದ್ರಾ? ದೇವಾನುದೇವತೆಗಳಲ್ಲಿ ನಾನೇ ಶ್ರೇಷ್ಠಳು!' 
ವಿಷ್ಣು ನಕ್ಕ .. 
'ಅದ್ಯಾಕೆ ಆ ನಗು? ನನ್ನ ಮಾತಲ್ಲಿ ನಂಬಿಕೆ ಇಲ್ವಾ ?ಅಲ್ಲಿ ನೋಡಿ ಭೂಮಿಯಲ್ಲಿ' ಅಂದ್ಳು 
ಅವಳು ಹೇಳಿದ್ದು ಯಾವುದು ಸುಳ್ಳಿರಲಿಲ್ಲ . ಭೂಮಿ ತುಂಬಾ ಅವಳಿಗಾಗಿ ನೈವೇದ್ಯ, ಹರಕೆ, ವೈಭವ ಓಹ್ ... ಅವಳನ್ನ ಬೇಡ ಎನ್ನುವವರೇ ಇಲ್ಲ .. ವಿಷ್ಣು ಕೂಡ ಹೆಂಡತಿಯ ಕಡೆ ಅಭಿಮಾನದಿಂದ ನೋಡಿದ . 
ಆದ್ರೂ ಆ ಅಹಂ...
ಹೆಂಡತಿಗೆ ಅಲ್ಲೊಂದು ಕಡೆ ನೋಡಲು ಹೇಳಿದ . ಅಲ್ಲೊಬ್ಬ ವ್ಯಕ್ತಿ ಸತ್ತಿದ್ದ.. "ಇವನಿಗೂ ನಿನ್ನ ಅಗತ್ಯ ಇದೆಯೇ ಪ್ರಿಯೆ ?" ಎಂದ
ಲಕ್ಷ್ಮಿ ಒಂದು ಕ್ಷಣ ವಿಚಲಿತಳಾದಳು .. ಮತ್ತೆ ಸ್ತಬ್ದಳಾದಳು ...
"ನಾನು" ಇರೋವರೆಗೂ ಮಾತ್ರ ನಿನ್ನ ಅಗತ್ಯ ಲಕ್ಷ್ಮಿ .. 'ನಾನು' ಅಂದ್ರೆ ಒಳಗಿನ ಉಸಿರು , 'ನಾನು' ಅಂದ್ರೆ ಜೀವಾತ್ಮ ........ ಮತ್ತೆ 'ನಾನು' ಅಂದ್ರೆ ಸ್ವಾರ್ಥ ಕೂಡ!!ಅಂದ .
ನೆನ್ನೆ ಮನೆಗೆ ಬಂದ ಹಿರಿಯರೊಬ್ಬರು ಹೇಳಿದ ಕಥೆ ...
ಹಂಚಿಕೊಳ್ಳಬೇಕು ಅನಿಸ್ತು

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...