Wednesday 9 August 2017

ಅಜ್ಜಿ ಮೊಮ್ಮಗನಿಗೆ :"ಮಗ ಹೋಗಿ ತನಿ ಎರೆದು ಬರೋದಲ್ವಾ ... ಒಳ್ಳೆಯದಾಗುತ್ತೆ "
ಮೊಮ್ಮಗ : "ಕೊಡಮ್ಮ ಹೋಗ್ ಬರ್ತೀನಿ "
ಅಮ್ಮ ಬಾಳೆಹಣ್ಣು,ಹಾಲು, ಕರ್ಪೂರ ಕೊಟ್ಲು 'ನಾ ಆಮೇಲೆ ಹೋಗಿ ಬರ್ತೀನಿ ,ನೀ ಹಾಲು ಕೊಟ್ಟು ಕರ್ಪೂರ ಹಚ್ಚಿ ಬಾ ಸಾಕು'
ಮೊಮ್ಮಗ ಹೋದ. ಒಂದ್ಹತ್ತು ನಿಮಿಷ ಬಿಟ್ಟು ಬಂದ .. 
ಅಜ್ಜಿ 'ಎರೆದ ಮಗ' 
ಮೊಮ್ಮಗ "ಹ್ಮ್ಮ್ ಅಜ್ಜಿ ' ಅಂದ
ಅಮ್ಮ ಅಡುಗೆ ಮನೆಯಲ್ಲಿ ಚಪಾತಿ ಲಟ್ಟಿಸ್ತಾ ಇದ್ಳು . 'ತಿಂಡಿ ರೆಡಿನಾ ಅಮ್ಮಾ ' ಅಂತ ಜೋರಾಗಿ ಕೇಳಿ, ಒಳಗೆ ಬಂದು 'ಬಾಳೆಹಣ್ಣು ಹಸುಗೆ ಕೊಟ್ಟೆ , ನಾಯಿಗೆ ಹಾಲು ಹಾಕಿದ್ದೀನಿ , ಕರ್ಪೂರ ಹಚ್ಚಿ ಬಂದಿದ್ದೀನಿ , ನಿಮ್ಮತ್ತೆ ಮುಂದೆ ಭಜನೆ ಶುರು ಮಾಡಬೇಡ ಆಯ್ತಾ , ನೀ ಹೆಂಗು ಮತ್ತೆ ಅಭಿಷೇಕಕ್ಕೆ ಅಂತ ಹಾಲು ಕೊಡ್ತೀಯಲ್ಲ " ಅಂದ ತಲೆ ಸವರುತ್ತಾ ...
ಅಪ್ಪನದೇ ಡ್ರಾಮ ಕಂಪನಿ ಅಲ್ವೇ  ಡೈಲಾಗ್ ಹೆಂಗೆ ಬದಲಾಗುತ್ತೆ ?? ಅದ್ ಹೆಂಗೆ ಬ್ಯಾಲನ್ಸ ಮಾಡೋದು ಅಂತ ಅರಿತವ )))

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...