Thursday 9 November 2017

ಮೊನ್ನೆ ಮೊನ್ನೆ ಮನೆಗೆ ಬಂದ ಹಿರಿಯ ಗೆಳೆಯರೊಬ್ಬರೊಡನೆ ಮಾತಾಡ್ತಾ ಇದ್ವಿ . ಮಾತಿಗೆ ಮಾತು ಬಂದು ಮಕ್ಕಳನ್ನ ಬೆಳೆಸುವ ವಿಷ್ಯಕ್ಕೆ 'ಊರ ಬಾಗಿಲು ಕಾಯ್ದು ದೊಡ್ಡ ಬೋರೇಗೌಡ ಅನಿಸಿಕೊಂಡಂತೆ' ಅಂದ್ರು ಮಂಜು .
ಅದಕ್ಕಾ ಹಿರಿಯರು 'ಸಾಂಬನ ಕಥೆ ಗೊತ್ತಲ್ಲ? ಕೃಷ್ಣನ ಮಗ ಸಾಂಬನದು?" ಅಂದ್ರು ಮತ್ತೆ ಮುಂದುವರೆಸಿದರು "ಸಾಂಬ ಜಾಂಬವತಿ-ಕೃಷ್ಣನ ಮಗ. ತನ್ನ ತಂದೆಯ ವೇಷ ಧರಿಸಿ ತಂದೆಯ ಉಪಪತ್ನಿಯರನ್ನೇ ಮೋಸಗೊಳಿಸುತ್ತಾನೆ. ಕೋಪಗೊಂಡ ಅಪ್ಪ ಮಗನಿಗೆ ಚರ್ಮವ್ಯಾದಿಯ ಶಾಪ ನೀಡುತ್ತಾನೆ . ಸಾಂಬ ಸೂರ್ಯದೇವನಿಗೆ ದೇಗುಲಗಳನ್ನ ಕಟ್ಟಿಸಿ ಶಾಪ ವಿಮುಕ್ತಿಗೊಳ್ಳುತ್ತಾನೆ.(sun temple Konarak) 
ದುರ್ಯೋಧನನ ಮಗಳನ್ನ ಅಪಹರಿಸಿ ಸಿಕ್ಕಿಬಿದ್ದು ಯಾದವರಿಗೂ-ಕೌರವರಿಗೂ ಯುದ್ಧಕ್ಕೆ ಬೀಳುವಂತಾದಾಗ ಆತನ ದೊಡ್ಡಪ್ಪ ಬಲರಾಮ ನಿಂತು ರಾಜಿ ಮಾಡಿಸುತ್ತಾನೆ.
ಕಡೆಗೆ ಒಮ್ಮೆ ದೂರ್ವಾಸರು ಹಾಗು ಇತರ ಮುನಿಗಳು ದ್ವಾರಕೆಗೆ ಕೃಷ್ಣನ ದರ್ಶನಕ್ಕೆಬಂದಾಗ ಒನಕೆಯನ್ನ ಉದರಕ್ಕೆ ಸುತ್ತಿಕೊಂಡು ಗರ್ಭಿಣಿಯಂತೆ ನಟಿಸಿ 'ತನಗೆಂತ ಮಗು ಹುಟ್ಟುವುದೆಂದು ಅವರನ್ನ ಹಾಸ್ಯ ಮಾಡುವಂತೆ ಕೇಳಿದಾಗ ಕೋಪಗೊಂಡ ಮುನಿಗಳು ನಿನಗೊಂದು ಒನಕೆ ಹುಟ್ಟಲಿ, ಅದರಿಂದಲೇ ಯದುಕುಲ ಕೊನೆಯಾಗಲಿ ಅಂತ ಶಾಪ ನೀಡುತ್ತಾರೆ. ಕಡೆಗೊಂದು ದಿನ ಮುನಿಗಳ ಶಾಪದಂತೆ ಸಾಂಬ ಒನಕೆಕೆ ಜನ್ಮ ನೀಡುತ್ತಾನೆ . ಅದನ್ನೆಲ್ಲ ಚೂರು ಚೂರು ಮಾಡಿ ಯಮುನೆಯ ತಟದಲ್ಲಿ ಎಸೆದು ಬಿಡುತ್ತಾನೆ. ಯಾದವೀ ಕಲಹ ಶುರುಗುವಷ್ಟರಲ್ಲಿ ಈ ಒನಕೆಯ ಚೂರುಗಳು ದೊಡ್ಡ ಹುಲ್ಲಿನ ಜಂಡುಗಳಾಗಿ ಬೆಳೆದು ಯಾದವರು ಅವುಗಳಿಂದಲೇ ಆಯುಧ ಮಾಡಿ ಬಡಿದಾಡಿ ಸಾಯುತ್ತಾರೆ. ಕಡೆಗೆ ಕೃಷ್ಣ ಕೂಡ ನೊಂದು ಯಮುನೆಯ ತಟದಲ್ಲಿ ಆ ಹುಲ್ಲು ಜೊಂಡಿನ ನಡುವೆ ಮಲಗಿದ್ದಾಗ ಜರ ಎಂಬ ಬೇಟೆಗಾರ ಅವನನ್ನು ಯಾವುದೋ ಪ್ರಾಣಿ ಅಲ್ಲಿ ಮಲಗಿದೆಂದು ಭ್ರಮಿಸಿ ಬಾಣಹೂಡಿಬಿಡುತ್ತಾನೆ.. ಅಲ್ಲಿಗೆ ಯದುಕುಲದ ಪರಿಸಮಾಪ್ತಿಯಾಗುತ್ತದೆ ' ಅಂದ್ರು .
ಅಮ್ಮ ಅಪ್ಪನಾಗೋದು ಅಂದ್ರೆ ಕೇವಲ ದೈಹಿಕವಾಗಲ್ಲ ಮಾನಸಿಕವಾಗಿ ದೈವಿಕವಾಗಿ ಕೂಡ ಮಕ್ಕಳನ್ನ ಬೆಳೆಸಬೇಕೇನೋ. ಒಂದಷ್ಟು ಸಮಯ, ಒಂದಷ್ಟು ಪ್ರೀತಿ, ಒಂದಷ್ಟು ಅಪ್ಪನಾಗಿ, ಅಮ್ಮನಾಗಿ ಮಕ್ಕಳೊಡನೆ ಮಾತುಕತೆ ಅಗತ್ಯವೇನೋ ಅಲ್ವೇ ...
ಹಂಚಿಕೊಳ್ಳಬೇಕು ಅನಿಸ್ತು .... 

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...