Thursday 9 November 2017

ಮೊನ್ನೆ ಮೊನ್ನೆ ಒಂದ್ ದಿನ ಎಂದಿನಂತೆ ಪುಟ್ಟಿನ ಕಾಲೇಜಿಂದ ಕರ್ಕೊಂಡ್ ಬರೋಕೆ ಹೋಗಿದ್ದೆ . ಗಾಡಿ ಹತ್ತಿದ ಕೂಡ್ಲೆ ಎಂದಿನಂತೆ "ಕಥೆ" ಶುರು ಮಾಡಿದ್ಲು ."ಊಟ ಮಾಡ್ದ ಕುಳ್ಳಿಮಾ? " ಇನ್ನೂ ನಾ ಉತ್ತರಿಸಿಯೇ ಇರಲಿಲ್ಲ ಆಗ್ಲೇ 'ಮಾ, ಈವತ್ತು ನಮ್ ಕ್ಲಾಸ್ ಅಲ್ಲಿ ೮ ಜನ "ಸೀಸು" . ಪ್ರಿನ್ಸಿ ಪೇರೆಂಟ್ಸ್ ಕರೆಸಿದ್ರು ' ಅಂದ್ಲು . (ಇವಳು ಕಾಲೇಜ್ಗೆ ಹೋಗೋಕೆ ಶುರು ಮಾಡಿದ ಮೇಲೆ ನನ್ನ ಪದಭಂಡಾರಕ್ಕೆ ಸುಮಾರು ಹೊಸಹೊಸ ಪದಗಳನ್ನ ಸೇರಿಸಿದ್ದಾಳೆ!! ಅಂತಹದೇ ಇದೂ ಒಂದು ಸೀಸು -ಸಿಕ್ಕಿಹಾಕೊಳ್ಳೋದು) 'ಯಾಕ್ ಮಗ' ಅಂದೆ. ಮೊನ್ನೆ ಕ್ಲಾಸಿಂದ ಎಪಿಎಸ್(!!) ( ಅಂದ್ರೆ ಎಸ್ಕೇಪ್/ಚಕ್ಕರ್!!) ಆಗಿ ತಲಕಾಡಿಗೆ ಹೋಗಿದ್ರಂತೆ. ಸಿಕ್ಕಿಹಾಕಿಕೊಂಡು ಅವರ ಅಪ್ಪಅಮ್ಮನ್ನ ಕರೆಸಿದ್ರು. ಆಫೀಸ್ ಈವತ್ತು ರಣರಂಗ ಆಗೋಗಿತ್ತು " ಅಂತೆಲ್ಲ ಹೇಳಿದ್ಲು. 'ನೀ ಹೋಗಿರ್ಲಿಲ್ಲ ತಾನೇ ' ಅಂತ ಕಾಲೆಳೆದೆ. 'ನಾವ್ ಗೊತ್ತಲ್ಲ, ಹಂಗೆಲ್ಲಾ ಹೇಳ್ದೆ ಹೋಗೋ ಸೀನೇ ಇಲ್ಲ, ನಿನ್ನ "ಅಳಿಯನ"(!!!) ಜೊತೆ ಹೋದ್ರು ಹೇಳ್ಬಿಟ್ ಹೋಯ್ತಿನಿ ಬಿಡಮ್ಮ' ಅಂದ್ಲು .'ಕರ್ಮ ಮಾರಾಯ್ತಿ ನಿಂದು, ಅಮ್ಮ ಅನ್ನೋ ಭಯನೇ ಇಲ್ಲ ' ಅಂತ ಬೈಕೊಂಡು ಬಂದೆ . ಕಿಸಿಕಿಸಿ ನಗುತ್ತಾ ಬೆನ್ನಿಗೆ ಒರಗಿ "ಲವ್ ಯು ಮಾ' ಅಂದ್ಲು ..
ಒಂದೆರಡು ದಿನ ಆಗಿತ್ತು . ಸುಮಾರು ೨ ಗಂಟೆಯಲ್ಲಿ ಕಾಲೇಜಿಂದ ಕರೆ ಬಂತು . 'ನಾವು, ___ ಕಾಲೇಜಿಂದ" ಅಂದ್ರು. ಪುಟ್ಟಿ ಹೇಳಿದ್ದ ಮಾತುಗಳು ನೆನಪಿಗೆ ಬಂದು ಒಂದಷ್ಟು ಬೆಚ್ಚಿದಂತಾಗಿ "ಹೇಳಿ ' ಅಂದೆ . "ನೀವು ಕೃತಿ ಮಂಜುನಾಥ್ ಪೇರೆಂಟಾ"? ಅಂದ್ರು. 'ಹೌದು ಹೇಳಿ ' ಅಂದೆ . 'ಎರಡನೇ ಟರ್ಮ್ ಫೀಸ್ ಬಾಕಿ ಇದೆ ಮೇಡಂ' ಅಂದ್ರು. ಇಲ್ಲಾ, ಕಟ್ಟಿ receipt ಕೂಡ ಆಫೀಸಿಗೆ ಕಳಿಸಿದ್ದೀನಿ. ಆಗ್ಲೇ ೧೫ ದಿಂದ ಮೇಲಾಯ್ತು ಒಮ್ಮೆ ಚೆಕ್ ಮಾಡಿ' ಅಂದೆ . 'ಕಟ್ಟಿದ್ರೆ ಸರಿ ಮೇಡಂ, ಸಾರಿ ಮೇಡಂ ' ಅಂತ ಫೋನ್ ಇಟ್ರು.
ಮನಸ್ಸು ಅದೆಷ್ಟು ವಿಚಿತ್ರ ಅಲ್ವೇ ! ಕ್ಷಣಗಳಲ್ಲಿ ಎಲ್ಲಿಂದೆಲ್ಲಿಗೋ ಹೋಗಿಬಿಡುತ್ತದೆ . ಒಳಿತಿಗಿಂತ ಕೆಡುಕೇ ಅಥವಾ ಕೆಡುಕಿನ ಭಯವೇ ಮನಸ್ಸಿನ ಪದರದಲ್ಲಿ ಅವಿತಿರುತ್ತದೇನೋ ಅನಿಸುವಂತೆ ! ಅದೆಷ್ಟೇ ನಂಬಿಕೆಯಿದ್ದರೂ ಅಲ್ಲೆಲ್ಲೋ ಒಂದು ಸಣ್ಣ ಅಪನಂಬಿಕೆಯ ಎಳೆ ಹುದುಗಿ ಕುಳಿತಂತೆ.....
ಪುಟ್ಟಿಗೆ ಸಂಜೆ "ಹಿಂಗ್ ಹಿಂಗೇ ಮಗ , ಭಯ ಆಯ್ತು, ನೀ ಚಕ್ಕರ್ ಹಾಕಿ ಎಲ್ಲಾದ್ರೂ ಹೋಗಿದ್ಯೇನೋ ಅಂತ" ಅಂದೆ . "ಮೌ,ನಾ ಹೇಳಿಲ್ವ, ಹೋಗೋದಾದ್ರೆ ಹೇಳೇ ಹೋಗ್ತೀನಿ ನಿನ್ನಳಿಯನ ಜೊತೆ ಅಂತ , ಸುಮ್ನೆ ಟೆನ್ಶನ್ ಮಾಡ್ಕೋ ಬೇಡ ಸರಿನಾ.... ಈಗ ಒಂದಿನ್ನೂರು ಈ ಕಡೆ ತಳ್ಳು, ನಾಳೆ ನನ್ ಫ್ರೆಂಡ್ ಬರ್ತ್ಡೇ ಐತೆ !!!" ಅಂದ್ಳು ..
ಪುಣ್ಯ ಮಾಡಿ ಹೆತ್ತಿದ್ದೀನಿ ಇವಳನ್ನ ....))ಇವ್ಳು ಉದ್ದಾರ ಅಗೋ ಚಾನ್ಸ್ ಇಲ್ಲ ......

No comments:

Post a Comment

ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...