ಅಮ್ಮ ಮಗ ಜಗಳ ಆಡಿದರು .. ತಮ್ಮದಲ್ಲದ ವಿಷಯಕ್ಕೆ, ಸಲ್ಲದ ಪ್ರತಿಷ್ಠೆಗೆ ಬಿದ್ದು ಜಗಳ ಆಡಿದರು .... ಮಾತು ನಿಂತು ಹೋಗಿತ್ತು .. ಸರಿ ಗೊತ್ತೇ ಇದೆಯಲ್ಲ ತಪ್ಪು ಯಾರದೇ ಇದ್ದರೂ ಅದು ಬೀಳೋದು ಸೊಸೆಯ ಮೇಲೆಯೇ.. ಸೊಸೆಯ ಜೊತೆ ಕೂಡ ಮಾತು ನಿಂತು ಹೋಯ್ತು .. ಅಮ್ಮ ಮಗನ ಮನೆಗೆ ಬರೋದು ನಿಂತು ಹೋಯ್ತು .. ವಾರಕ್ಕೆ ಒಂದೆರಡು ಬಾರಿ ಅಮ್ಮನನ್ನ ನೋಡಿ ಬರುತ್ತಿದ್ದ ಮಗ ಕೂಡ ತನ್ನದಲ್ಲದ ತಪ್ಪಿಗೆ ತಾನೇಕೆ ಬಗ್ಗಲಿ ಎಂದು ಹೋಗೋದೇ ಬಿಟ್ಟ ...ಸುಮ್ಮನೆ ಬೇಡದ ವಿರಸ ಬೇಡ ಎಂದ ಹೆಂಡತಿಗೆ ತಲೆ ಕೆಡಿಸಿಕೊಳ್ಳದೆ ಇರಲು ಸಲಹೆ ನೀಡಿದ... !! ಹಿರಿಯರ ಪ್ರತಿಷ್ಠೆಗೆ ನಲುಗಿದ್ದು ಪುಟ್ಟ ಮಕ್ಕಳ ಮನಸ್ಸುಗಳು ...ಎಲ್ಲೋ ಅಲ್ಲೊಮ್ಮೆ ಇಲ್ಲೊಮ್ಮೆ ಸಿಕ್ಕಾಗ ಮಾತಾಡುವುದು ಬಿಟ್ಟರೆ ಶಾಲೆ, ಆಟ ಪಾಠ ಇಷ್ಟೇ ಬದುಕು ಎಂಬಂತೆ ಆಗಿಹೋಯ್ತು ..... ಹಬ್ಬಕ್ಕೆ ಒಂದಾಗಲಿಲ್ಲ ... ನೆಂಟರ ಸಾವಿಗೆ ಹೋದರೂ ಅಮ್ಮ ಮಗ ಮಾತಾಡಲಿಲ್ಲ .... ಇಬ್ಬರ ಮನದಲ್ಲೂ ನೋವಿನ ಗೆರೆಗಳು .... ಮಾತನಾಡಲು ಹುಂಬ ಪ್ರತಿಷ್ಠೆ .....ಮಾತಾಡಲು ವೇದಿಕೆಗಾಗಿ ಕಾದೇ ಕಾದರು ....ಕಡೆಗೊಮ್ಮೆ ಮೌನ ಮುರಿದು ಮಾತಾಡಿದರು .... ಅಮ್ಮ ಮಗ ಒಂದಾದರು ..ಅಮ್ಮ ಅತ್ತಳು, ನಕ್ಕಳು , ಮಗ ಅಮ್ಮನನ್ನ ತಬ್ಬಿ ಸಂತೈಸಿದ ... ಮಕ್ಕಳು ನಕ್ಕರು ... ಎಲ್ಲರಿಗೂ ಖುಷಿ .............'ಮನೆಗೆ ಬಾಮ ' ಸೊಸೆಯನ್ನ ಕರೆದಳು ಅತ್ತೆ .... ಸೊಸೆ ಮುಖ ನೋಡಿದಳು .....ಆ ನೋಟದ ನೋವಿಗೆ ಆ ನೋಟದ ಪ್ರಶ್ನೆಗಳಿಗೆ ಅತ್ತೆ ಉತ್ತರಿಸದಾದಳು .... 'ಒಂದೆರಡು ಮಾತಿದೆ ಆ ಮಾತಿಗೆ ಉತ್ತರ ಸಿಕ್ಕರೆ ನಾ ಮನೆಗೆ ಬರುವೆ ಅಮ್ಮ .." ಅಂದ್ಲು .... ಗಂಡನ ಮೊಗದಲ್ಲಿ ಈಗ ಇದೆಲ್ಲ ಬೇಕಾ ಎಂಬ ಪ್ರಶ್ನೆ ... ಮಕ್ಕಳ ಮೊಗದಲ್ಲಿ ಅಮ್ಮ ಏನ್ ಹೇಳ್ತಾಳೋ ಅನ್ನೋ ಭಯ ... ವಾರಗಿತ್ತಿಯ ಮಕ್ಕಳ ಮೊಗದಲ್ಲಿ ಮತ್ತೆ ದೊಡ್ಡಮ್ಮ ಅಕ್ಕ ಅಣ್ಣನನ್ನ ಕರೆದುಕೊಂಡು ಹೋಗಿಬಿಡ್ತಾಳೇನೋ ಅನ್ನೋ ನೋವು .......... 'ಅಮ್ಮ ನೀವು ಅಮ್ಮ ಮಗ ಅಲ್ಲದೆ , ನಾನು ನೀವು ಜಗಳ ಆಡಿದ್ದರೆ ; ನಿಮ್ಮ ಮಗನ ಜೊತೆ ಮಾತಾಡೋದು ಬಿಡ್ತಾ ಇದ್ರಾ ?? .....ಅವರದಲ್ಲದ ತಪ್ಪಿಗೆ ನನ್ನ ಮಕ್ಕಳು ನೋವು ಅನುಭವಿಸಿದ್ದು ಸರಿನಾ ??? ... ಈಗ ಕೂಡ ನೀವು ನಿಮ್ಮ ಮಗನಿಗಾಗಿ ಕರಿತಾ ಇದ್ದೀರಾ ಹೊರತೂ ................ " ಅನ್ನೋ ಪ್ರಶ್ನೆಗಳೆಲ್ಲಾ ಮನದ ಮೂಲೆಯಲ್ಲೇ ಹುದುಗಿಸಿ ಬಿಟ್ಟಳು .......... ಮತ್ತೊಮ್ಮೆ ಭೂಮಿಯಾಗಿ ಬಿಟ್ಟಳು ............ಅಭಿಮಾನ!!!....... ನಕ್ಕು ಬಿಟ್ಟಳು ...ನಗುವಿನ ಜೊತೆ ಬಂದ ಕಣ್ಣ ಹನಿ ಯಾರಿಗೂ ಕಾಣಲೇ ಇಲ್ಲ ............... !!
Wednesday, 1 February 2017
ಮನೆ ಅಂದ ಮೇಲೆ ಮಾತು ಬರುತ್ತೆ ಹೋಗುತ್ತೆ . ಸಣ್ಣ ಮಾತುಗಳು ಅತ್ತೆ ಸೊಸೆಯರ ನಡುವೆ ಇದ್ದೆ ಇರುತ್ತದೆ ..ಅದಕ್ಕೆ ನಮ್ಮ ಮನೆಯೂ ಹೊರತಲ್ಲ...ಬಹಳಷ್ಟು ಸಾರಿ ನಾವು ಮೂರೂ ಜನ ಸೊಸೆಯಂದಿರು ಅಯ್ಯೋ ಅವರ ಬುದ್ದಿ ಗೊತ್ತಲ್ಲ ಮತ್ತ್ಯಾಕೆ ಹೆಚ್ಚು ತಲೆ ಕೆಡಿಸಿಕೊಳ್ಳೋದು ಅಂತ ಸುಮ್ಮನಾಗಿ ಬಿಡ್ತೀವಿ , ಆದ್ರೂ ಕೆಲವೊಮ್ಮೆ ಮನಸ್ಸಿನ ಪರಿಸ್ಥಿತಿಗೆ ಅನುಗುಣವಾಗಿ ಕೆಲವೊಮ್ಮೆ ವಯಸ್ಸಿಗೆ ಬಂದ ಮಕ್ಕಳಿರುವ ನಾವು ಅನಿಸಿಕೊಳ್ಳೋದಾ ಅನ್ನೋ ಸಿಟ್ಟಿಗೆ ಏನಾದ್ರು ಅಂದು ಬಿಡೋದು ಉಂಟು . ಮೊನ್ನೆ ಅತ್ತೆ ಬಂದಿದ್ರು ಏನೋ ಸಣ್ಣ ಪುಟ್ಟ ಮಾತುಗಳು ಬಂದ್ವು ಅಲ್ಲಿ ಅಂತ ಬೇಸರಗೊಂಡಿದ್ದರು.. ಅವರಮ್ಮನಿಗೆ ಒಂದಷ್ಟು ಸಮಾಧಾನ ಬುದ್ದಿ ಹೇಳಿದ ಮೇಲೆ , ಅತ್ತೆ ಮಲಗಲು ಹೋದ ಮೇಲೆ ಮಂಜು ಹೇಳಿದ್ರು "ಅವ್ರ ಕಥೆ ಗೊತ್ತಲ್ವ ಸುನಿ ನಿನಗೆ.. ೨೫ ವರ್ಷದಿಂದ ನೋಡ್ತಾನೆ ಬಂದಿದ್ದೀಯ, ನಿಮ್ಮ ಮೂರು ಜನರ(ವಾರಗಿತ್ತಿಯರು) ಬಗ್ಗೆ ಒಂದ್ ಮಾತು ಇಲ್ಲ .. ನಮಗೆಲ್ಲ ತಾಯಂದಿರು ನೀವು...'
ಹಾಗೆ ಮಾತಾಡ್ತಾ ಮಾತಾಡ್ತಾ .... 'ದಿನಾ ಅದೇ ಬಾವಿಯಲ್ಲಿ ನೀರ್ ತೆಗಿತಾ ಇದ್ರೆ ಬಾವಿಯ ಆಳ ಗೊತ್ತಿರುತ್ತದೆ ಕಣಮ್ಮ! ಹಗ್ಗ ಇಷ್ಟಕ್ಕೆ ನಿಂತರೆ ಬಿಂದಿಗೆ ಮುಳುಗುತ್ತೆ ,ನೀರು ಸಿಗ್ತದೆ ಅಂತ ! ಹೊಸದಾಗಿ ಬಾವಿ ಹತ್ರ ಬಂದವ್ರಿಗೆ ನೀರಿನ ಆಳ ತಿಳಿಯೋದಿಲ್ಲ ! ನೀನೂ ತಿಳ್ಕೋ ಬದುಕೋದು ಹೇಗೆ ಅಂತ !! ನಿನ್ ಮಕ್ಕಳು ನಿನ್ನನ್ನ ಹುಟ್ಟಿದಾಗಿಂದ ನೋಡಿರ್ತಾರೆ. ನೀ ಬೇಸರಗೊಂಡು ಮಾತಾಡಿದ್ರೆ ನಿನ್ ಮಕ್ಕಳಿಗೆ ನಮ್ಮಮ್ಮ ಹಿಂಗೆ ಅಂತ ಗೊತ್ತಿರುತ್ತೆ ಆದ್ರೆ ಸೊಸೆ ಅಥ್ವ ಅಳಿಯ ನಿನ್ನ ಆಗಷ್ಟೇ ನೋಡ್ತಾ ಇರ್ತಾರೆ, ಅವ್ರು ಬೇರೆ ಕಡೆಯಿಂದ ಬಂದು ನಿನ್ನ ಮನೆಗೆ ಸೇರ್ತಾರೆ... ಮಾತಾಡುವಾಗ ಸ್ವಲ್ಪ ತಡೆದು ಮಾತನಾಡು.. ಅಷ್ಟರಲ್ಲಿ ನಿನಗೇ ಗೊತ್ತಾಗಿರುತ್ತೆ ಆ ಮಾತು ಅಗತ್ಯನಾ ಇಲ್ವಾ ಅಂತ .. 'ನನ್ನ' ಮನೆ ಇದು 'ಹೀಗೆ' ಇರಬೇಕು ಅಂತ ಅನ್ಕೊಬೇಡ..!!! ನಿನ್ನ ಕಾಲ, ನಿನ್ನ ಬದುಕು, ನೀ ಬದುಕ ನೋಡೋ ರೀತಿಯಲ್ಲೇ ಎಲ್ಲಾರೂ ನೋಡಬೇಕು ಅಂದಾಗಲೇ ಇದೆಲ್ಲ ಬರೋದು.... ಅಂತೆಲ್ಲ ಹೇಳ್ತಾ ಹೋದ್ರು !!! "ಅಯ್ಯೋ ಶಿವ, ಒಂದ್ ಪುಸ್ತಕ ಓದೋದಿಲ್ಲ(ಓದಿಲ್ಲ) ಆದ್ರೂ ಈ ಪಾಟಿ ಬುದ್ದಿ ಎಲ್ಲಿರುತ್ತೋ ಕಾಣೆ'!!!
ಮನಸ್ಸು ಒಮ್ಮೆಮ್ಮೆ ಮಳೆಯ ನಂತರ ಮೂಡೋ ಕಾಮನಬಿಲ್ಲಿನ ಚಿತ್ತಾರದ ಬಾನಿನಂತೆ... ಪಾಠ ಕಲಿಯೊದಕ್ಕೆ ಪುಸ್ತಕವೇಕೆ ಇಂತಹ ಜೀವದ ಗೆಳೆಯನಿದ್ದರೆ ಅನ್ನೋ ಹಾಗೆ
:))))
ಹಾಗೆ ಮಾತಾಡ್ತಾ ಮಾತಾಡ್ತಾ .... 'ದಿನಾ ಅದೇ ಬಾವಿಯಲ್ಲಿ ನೀರ್ ತೆಗಿತಾ ಇದ್ರೆ ಬಾವಿಯ ಆಳ ಗೊತ್ತಿರುತ್ತದೆ ಕಣಮ್ಮ! ಹಗ್ಗ ಇಷ್ಟಕ್ಕೆ ನಿಂತರೆ ಬಿಂದಿಗೆ ಮುಳುಗುತ್ತೆ ,ನೀರು ಸಿಗ್ತದೆ ಅಂತ ! ಹೊಸದಾಗಿ ಬಾವಿ ಹತ್ರ ಬಂದವ್ರಿಗೆ ನೀರಿನ ಆಳ ತಿಳಿಯೋದಿಲ್ಲ ! ನೀನೂ ತಿಳ್ಕೋ ಬದುಕೋದು ಹೇಗೆ ಅಂತ !! ನಿನ್ ಮಕ್ಕಳು ನಿನ್ನನ್ನ ಹುಟ್ಟಿದಾಗಿಂದ ನೋಡಿರ್ತಾರೆ. ನೀ ಬೇಸರಗೊಂಡು ಮಾತಾಡಿದ್ರೆ ನಿನ್ ಮಕ್ಕಳಿಗೆ ನಮ್ಮಮ್ಮ ಹಿಂಗೆ ಅಂತ ಗೊತ್ತಿರುತ್ತೆ ಆದ್ರೆ ಸೊಸೆ ಅಥ್ವ ಅಳಿಯ ನಿನ್ನ ಆಗಷ್ಟೇ ನೋಡ್ತಾ ಇರ್ತಾರೆ, ಅವ್ರು ಬೇರೆ ಕಡೆಯಿಂದ ಬಂದು ನಿನ್ನ ಮನೆಗೆ ಸೇರ್ತಾರೆ... ಮಾತಾಡುವಾಗ ಸ್ವಲ್ಪ ತಡೆದು ಮಾತನಾಡು.. ಅಷ್ಟರಲ್ಲಿ ನಿನಗೇ ಗೊತ್ತಾಗಿರುತ್ತೆ ಆ ಮಾತು ಅಗತ್ಯನಾ ಇಲ್ವಾ ಅಂತ .. 'ನನ್ನ' ಮನೆ ಇದು 'ಹೀಗೆ' ಇರಬೇಕು ಅಂತ ಅನ್ಕೊಬೇಡ..!!! ನಿನ್ನ ಕಾಲ, ನಿನ್ನ ಬದುಕು, ನೀ ಬದುಕ ನೋಡೋ ರೀತಿಯಲ್ಲೇ ಎಲ್ಲಾರೂ ನೋಡಬೇಕು ಅಂದಾಗಲೇ ಇದೆಲ್ಲ ಬರೋದು.... ಅಂತೆಲ್ಲ ಹೇಳ್ತಾ ಹೋದ್ರು !!! "ಅಯ್ಯೋ ಶಿವ, ಒಂದ್ ಪುಸ್ತಕ ಓದೋದಿಲ್ಲ(ಓದಿಲ್ಲ) ಆದ್ರೂ ಈ ಪಾಟಿ ಬುದ್ದಿ ಎಲ್ಲಿರುತ್ತೋ ಕಾಣೆ'!!!
ಮನಸ್ಸು ಒಮ್ಮೆಮ್ಮೆ ಮಳೆಯ ನಂತರ ಮೂಡೋ ಕಾಮನಬಿಲ್ಲಿನ ಚಿತ್ತಾರದ ಬಾನಿನಂತೆ... ಪಾಠ ಕಲಿಯೊದಕ್ಕೆ ಪುಸ್ತಕವೇಕೆ ಇಂತಹ ಜೀವದ ಗೆಳೆಯನಿದ್ದರೆ ಅನ್ನೋ ಹಾಗೆ
ಮನೆ ಅಂದ ಮೇಲೆ ಮಾತು ಬರುತ್ತೆ ಹೋಗುತ್ತೆ . ಸಣ್ಣ ಮಾತುಗಳು ಅತ್ತೆ ಸೊಸೆಯರ ನಡುವೆ ಇದ್ದೆ ಇರುತ್ತದೆ ..ಅದಕ್ಕೆ ನಮ್ಮ ಮನೆಯೂ ಹೊರತಲ್ಲ...ಬಹಳಷ್ಟು ಸಾರಿ ನಾವು ಮೂರೂ ಜನ ಸೊಸೆಯಂದಿರು ಅಯ್ಯೋ ಅವರ ಬುದ್ದಿ ಗೊತ್ತಲ್ಲ ಮತ್ತ್ಯಾಕೆ ಹೆಚ್ಚು ತಲೆ ಕೆಡಿಸಿಕೊಳ್ಳೋದು ಅಂತ ಸುಮ್ಮನಾಗಿ ಬಿಡ್ತೀವಿ , ಆದ್ರೂ ಕೆಲವೊಮ್ಮೆ ಮನಸ್ಸಿನ ಪರಿಸ್ಥಿತಿಗೆ ಅನುಗುಣವಾಗಿ ಕೆಲವೊಮ್ಮೆ ವಯಸ್ಸಿಗೆ ಬಂದ ಮಕ್ಕಳಿರುವ ನಾವು ಅನಿಸಿಕೊಳ್ಳೋದಾ ಅನ್ನೋ ಸಿಟ್ಟಿಗೆ ಏನಾದ್ರು ಅಂದು ಬಿಡೋದು ಉಂಟು . ಮೊನ್ನೆ ಅತ್ತೆ ಬಂದಿದ್ರು ಏನೋ ಸಣ್ಣ ಪುಟ್ಟ ಮಾತುಗಳು ಬಂದ್ವು ಅಲ್ಲಿ ಅಂತ ಬೇಸರಗೊಂಡಿದ್ದರು.. ಅವರಮ್ಮನಿಗೆ ಒಂದಷ್ಟು ಸಮಾಧಾನ ಬುದ್ದಿ ಹೇಳಿದ ಮೇಲೆ , ಅತ್ತೆ ಮಲಗಲು ಹೋದ ಮೇಲೆ ಮಂಜು ಹೇಳಿದ್ರು "ಅವ್ರ ಕಥೆ ಗೊತ್ತಲ್ವ ಸುನಿ ನಿನಗೆ.. ೨೫ ವರ್ಷದಿಂದ ನೋಡ್ತಾನೆ ಬಂದಿದ್ದೀಯ, ನಿಮ್ಮ ಮೂರು ಜನರ(ವಾರಗಿತ್ತಿಯರು) ಬಗ್ಗೆ ಒಂದ್ ಮಾತು ಇಲ್ಲ .. ನಮಗೆಲ್ಲ ತಾಯಂದಿರು ನೀವು...'
ಹಾಗೆ ಮಾತಾಡ್ತಾ ಮಾತಾಡ್ತಾ .... 'ದಿನಾ ಅದೇ ಬಾವಿಯಲ್ಲಿ ನೀರ್ ತೆಗಿತಾ ಇದ್ರೆ ಬಾವಿಯ ಆಳ ಗೊತ್ತಿರುತ್ತದೆ ಕಣಮ್ಮ! ಹಗ್ಗ ಇಷ್ಟಕ್ಕೆ ನಿಂತರೆ ಬಿಂದಿಗೆ ಮುಳುಗುತ್ತೆ ,ನೀರು ಸಿಗ್ತದೆ ಅಂತ ! ಹೊಸದಾಗಿ ಬಾವಿ ಹತ್ರ ಬಂದವ್ರಿಗೆ ನೀರಿನ ಆಳ ತಿಳಿಯೋದಿಲ್ಲ ! ನೀನೂ ತಿಳ್ಕೋ ಬದುಕೋದು ಹೇಗೆ ಅಂತ !! ನಿನ್ ಮಕ್ಕಳು ನಿನ್ನನ್ನ ಹುಟ್ಟಿದಾಗಿಂದ ನೋಡಿರ್ತಾರೆ. ನೀ ಬೇಸರಗೊಂಡು ಮಾತಾಡಿದ್ರೆ ನಿನ್ ಮಕ್ಕಳಿಗೆ ನಮ್ಮಮ್ಮ ಹಿಂಗೆ ಅಂತ ಗೊತ್ತಿರುತ್ತೆ ಆದ್ರೆ ಸೊಸೆ ಅಥ್ವ ಅಳಿಯ ನಿನ್ನ ಆಗಷ್ಟೇ ನೋಡ್ತಾ ಇರ್ತಾರೆ, ಅವ್ರು ಬೇರೆ ಕಡೆಯಿಂದ ಬಂದು ನಿನ್ನ ಮನೆಗೆ ಸೇರ್ತಾರೆ... ಮಾತಾಡುವಾಗ ಸ್ವಲ್ಪ ತಡೆದು ಮಾತನಾಡು.. ಅಷ್ಟರಲ್ಲಿ ನಿನಗೇ ಗೊತ್ತಾಗಿರುತ್ತೆ ಆ ಮಾತು ಅಗತ್ಯನಾ ಇಲ್ವಾ ಅಂತ .. 'ನನ್ನ' ಮನೆ ಇದು 'ಹೀಗೆ' ಇರಬೇಕು ಅಂತ ಅನ್ಕೊಬೇಡ..!!! ನಿನ್ನ ಕಾಲ, ನಿನ್ನ ಬದುಕು, ನೀ ಬದುಕ ನೋಡೋ ರೀತಿಯಲ್ಲೇ ಎಲ್ಲಾರೂ ನೋಡಬೇಕು ಅಂದಾಗಲೇ ಇದೆಲ್ಲ ಬರೋದು.... ಅಂತೆಲ್ಲ ಹೇಳ್ತಾ ಹೋದ್ರು !!! "ಅಯ್ಯೋ ಶಿವ, ಒಂದ್ ಪುಸ್ತಕ ಓದೋದಿಲ್ಲ(ಓದಿಲ್ಲ) ಆದ್ರೂ ಈ ಪಾಟಿ ಬುದ್ದಿ ಎಲ್ಲಿರುತ್ತೋ ಕಾಣೆ'!!!
ಮನಸ್ಸು ಒಮ್ಮೆಮ್ಮೆ ಮಳೆಯ ನಂತರ ಮೂಡೋ ಕಾಮನಬಿಲ್ಲಿನ ಚಿತ್ತಾರದ ಬಾನಿನಂತೆ... ಪಾಠ ಕಲಿಯೊದಕ್ಕೆ ಪುಸ್ತಕವೇಕೆ ಇಂತಹ ಜೀವದ ಗೆಳೆಯನಿದ್ದರೆ ಅನ್ನೋ ಹಾಗೆ
:))))
ಹಾಗೆ ಮಾತಾಡ್ತಾ ಮಾತಾಡ್ತಾ .... 'ದಿನಾ ಅದೇ ಬಾವಿಯಲ್ಲಿ ನೀರ್ ತೆಗಿತಾ ಇದ್ರೆ ಬಾವಿಯ ಆಳ ಗೊತ್ತಿರುತ್ತದೆ ಕಣಮ್ಮ! ಹಗ್ಗ ಇಷ್ಟಕ್ಕೆ ನಿಂತರೆ ಬಿಂದಿಗೆ ಮುಳುಗುತ್ತೆ ,ನೀರು ಸಿಗ್ತದೆ ಅಂತ ! ಹೊಸದಾಗಿ ಬಾವಿ ಹತ್ರ ಬಂದವ್ರಿಗೆ ನೀರಿನ ಆಳ ತಿಳಿಯೋದಿಲ್ಲ ! ನೀನೂ ತಿಳ್ಕೋ ಬದುಕೋದು ಹೇಗೆ ಅಂತ !! ನಿನ್ ಮಕ್ಕಳು ನಿನ್ನನ್ನ ಹುಟ್ಟಿದಾಗಿಂದ ನೋಡಿರ್ತಾರೆ. ನೀ ಬೇಸರಗೊಂಡು ಮಾತಾಡಿದ್ರೆ ನಿನ್ ಮಕ್ಕಳಿಗೆ ನಮ್ಮಮ್ಮ ಹಿಂಗೆ ಅಂತ ಗೊತ್ತಿರುತ್ತೆ ಆದ್ರೆ ಸೊಸೆ ಅಥ್ವ ಅಳಿಯ ನಿನ್ನ ಆಗಷ್ಟೇ ನೋಡ್ತಾ ಇರ್ತಾರೆ, ಅವ್ರು ಬೇರೆ ಕಡೆಯಿಂದ ಬಂದು ನಿನ್ನ ಮನೆಗೆ ಸೇರ್ತಾರೆ... ಮಾತಾಡುವಾಗ ಸ್ವಲ್ಪ ತಡೆದು ಮಾತನಾಡು.. ಅಷ್ಟರಲ್ಲಿ ನಿನಗೇ ಗೊತ್ತಾಗಿರುತ್ತೆ ಆ ಮಾತು ಅಗತ್ಯನಾ ಇಲ್ವಾ ಅಂತ .. 'ನನ್ನ' ಮನೆ ಇದು 'ಹೀಗೆ' ಇರಬೇಕು ಅಂತ ಅನ್ಕೊಬೇಡ..!!! ನಿನ್ನ ಕಾಲ, ನಿನ್ನ ಬದುಕು, ನೀ ಬದುಕ ನೋಡೋ ರೀತಿಯಲ್ಲೇ ಎಲ್ಲಾರೂ ನೋಡಬೇಕು ಅಂದಾಗಲೇ ಇದೆಲ್ಲ ಬರೋದು.... ಅಂತೆಲ್ಲ ಹೇಳ್ತಾ ಹೋದ್ರು !!! "ಅಯ್ಯೋ ಶಿವ, ಒಂದ್ ಪುಸ್ತಕ ಓದೋದಿಲ್ಲ(ಓದಿಲ್ಲ) ಆದ್ರೂ ಈ ಪಾಟಿ ಬುದ್ದಿ ಎಲ್ಲಿರುತ್ತೋ ಕಾಣೆ'!!!
ಮನಸ್ಸು ಒಮ್ಮೆಮ್ಮೆ ಮಳೆಯ ನಂತರ ಮೂಡೋ ಕಾಮನಬಿಲ್ಲಿನ ಚಿತ್ತಾರದ ಬಾನಿನಂತೆ... ಪಾಠ ಕಲಿಯೊದಕ್ಕೆ ಪುಸ್ತಕವೇಕೆ ಇಂತಹ ಜೀವದ ಗೆಳೆಯನಿದ್ದರೆ ಅನ್ನೋ ಹಾಗೆ
Subscribe to:
Posts (Atom)
ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...
-
ಹೀಗೊಂದು ಅನಿಸಿಕೆ ದೊಡ್ಡ ದೊಡ್ಡ ಮಾತುಗಳು ನನಗೆ ಅರಿವಾಗೋದಿಲ್ಲ, ದೊಡ್ಡ ದೊಡ್ಡ ವಿಷಯಗಳು ಅರ್ಥ ಆಗೋದಿಲ್ಲ. ಆದರೆ ಯಾರಿಗಾದರು ನೋವಾದರೆ ನನಗೂ ನೋವಾಗುತ್ತದೆ. ನನ್ನಿಂದ...
-
ನೆನ್ನೆ ಮಂಜು ಮತ್ತೆ ನಾನು ಮಹದೇಶ್ವರ ಬೆಟ್ಟಕ್ಕೆ ಹೋಗಿದ್ವಿ. ದರ್ಶನ ಎಲ್ಲಾ ಮುಗಿದ ಮೇಲೆ ಮಂಜು ತಿಂಡಿ ತಿಂದು ಹೊರಡೋಣ ಅಂದ್ರು. ನಾ ಬಸ್ ಪಯಾಣ ಮಾಡೋವಾಗ ಏನೂ ತಿನ್ನೋದಿ...
-
ಈ ಮದುವೆ ಅನ್ನೋದು ಬಂಧುತ್ವಗಳ ಬೆಸೆಯೋ ಸಾಧನ , ಅದೇನು ಸಂಭ್ರಮ, ಸಡಗರ, ಕಲರವ, ನಗು, ಅಲ್ಲೆಲ್ಲೋ ಒಂದೆರಡು 'ಸಣ್ಣ ' ಮಾತುಗಳು, ಇನ್ನೆಲ್ಲೋ ಒಂದು ಜಗಳ, ಹೆಣ್ಣ...